ಪುತ್ತೂರು: ಸೋಮವಾರ ಹಾಗೂ ಮಂಗಳವಾರ ಕೂಡಾ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ಒಂದು ದಿನದ ರಜೆ ನೀಡುವಂತೆ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಕಾಲೇ ಜುಗಳಿಗೆ ರಜೆ ನೀಡಲಾಗಿದ್ದು ಪದವಿ ಹಾಗೂ ನಂತರದ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಸಹಾಯಕ ಕಮೀಶನರ್ ಅವರ ಪ್ರಕಟಣೆ ತಿಳಿಸಿದೆ.
ಸೋಮವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿವಿದೆಡೆ ರಸ್ತೆಯಲ್ಲೇ ನೀರು ಹರಿಯುತ್ತಿದೆ. ಗ್ರಾಮೀಣ ಭಾಗದ ಹೊಳೆ ಹಾಗೂ ತೋಡುಗಳಲ್ಲಿ ಈ ವರ್ಷ ಮೊದಲ ಬಾರಿಗೆ ನೀರು ತುಂಬಿ ಹರಿದಿದೆ. ಈಗಲೂ ಉತ್ತಮ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರವೂ ಉತ್ತಮ ಮಳೆಯಾಗಲಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…