ಪುತ್ತೂರು: ಸೋಮವಾರ ಹಾಗೂ ಮಂಗಳವಾರ ಕೂಡಾ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ಒಂದು ದಿನದ ರಜೆ ನೀಡುವಂತೆ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಕಾಲೇ ಜುಗಳಿಗೆ ರಜೆ ನೀಡಲಾಗಿದ್ದು ಪದವಿ ಹಾಗೂ ನಂತರದ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಸಹಾಯಕ ಕಮೀಶನರ್ ಅವರ ಪ್ರಕಟಣೆ ತಿಳಿಸಿದೆ.
ಸೋಮವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿವಿದೆಡೆ ರಸ್ತೆಯಲ್ಲೇ ನೀರು ಹರಿಯುತ್ತಿದೆ. ಗ್ರಾಮೀಣ ಭಾಗದ ಹೊಳೆ ಹಾಗೂ ತೋಡುಗಳಲ್ಲಿ ಈ ವರ್ಷ ಮೊದಲ ಬಾರಿಗೆ ನೀರು ತುಂಬಿ ಹರಿದಿದೆ. ಈಗಲೂ ಉತ್ತಮ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರವೂ ಉತ್ತಮ ಮಳೆಯಾಗಲಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…