ಸುಬ್ರಹ್ಮಣ್ಯ:ಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಸುಬ್ರಹ್ಮಣ್ಯ ಕುಲ್ಕುಂದ ದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ.
ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಶೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…