ಸುಬ್ರಹ್ಮಣ್ಯ:ಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಸುಬ್ರಹ್ಮಣ್ಯ ಕುಲ್ಕುಂದ ದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ.
ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಶೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…