Advertisement

ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಬಳಕೆ- ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ

Share

ಧರ್ಮಸ್ಥಳ: ಭಾಷೆ, ಲಿಪಿಯ ಬೆಳವಣಿಗೆಗೆ ಇರುವ ಸವಾಲುಗಳನ್ನು ನಿವಾರಿಸಲು ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳುವ ಇರಾದೆ ಸರಕಾರಕ್ಕಿದೆ. ಭಾಷೆಯ ಬಳಕೆ ಹೆಚ್ಚಬೇಕು. ಅಧ್ಯಯನ ಕೇಂದ್ರದ ಮೂಲಕ ಮೂರು ವರ್ಷಗಳಲ್ಲಿ ದೇಶಕ್ಕೇ ಮಾದರಿಯಾಗುವಂತೆ ಯೋಜನೆಯನ್ನೊಂದನ್ನು ರೂಪಿಸಲಾಗುವುದು.

Advertisement
Advertisement

ಕನ್ನಡ ಭಾಷೆಯ ಬೆಳವಣಿಗೆಗೆ ಐಟಿ ವಿಭಾಗದಿಂದ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಪ್ರಕಟಿಸಿದರು. ಧರ್ಮಸ್ಥಳ ಲಕ್ಷದೀಪೋತ್ಸವದ ಕೊನೆಯ ದಿನ ಮಂಗಳವಾರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 87 ನೇ ಸಾಹಿತ್ಯ ಸಮ್ಮೇಳನವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕೇವಲ ಆರ್ಥಿಕ ಉನ್ನತಿಯಿಂದ ನಮ್ಮತನ ಉಳಿಯಲು ಸಾಧ್ಯವಿಲ್ಲ. ಇಂಗ್ಲೀಷ್ ವ್ಯಾಮೋಹದ ಮಧ್ಯೆ ಭಾಷೆ ಉಳಿಸಿಕೊಳ್ಳುವ ಪ್ರಯತ್ನ ಆಗಬೇಕಾಗಿದೆ. ಭಾಷೆ, ಸಂಸ್ಕೃತಿ ಬಿಟ್ಟು ಬಿಟ್ಟರೆ ನಮ್ಮತನ ಹೋದಂತೆ. ಇದು ಆಗಬಾರದು ಎಂಬ ಉದ್ದೇಶದಿಂದ ಇಂತಹ ಸಮ್ಮೇಳನ ಅಗತ್ಯವಾಗಿದೆ ಎಂದರು.

Advertisement

ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜನಪದ ವಿದ್ವಾಂಸ ಡಾ. ಬಿ.ಎ.ವಿವೇಕ ರೈ ಅವರು ಜನಮಾನಸವನ್ನು ಎಚ್ಚರಿಸುವ, ಸಾಮರಸ್ಯವನ್ನು ಮೂಡಿಸುವ ಸಾಹಿತ್ಯ ಇಂದು ಬರಬೇಕಾಗಿದೆ. ಸಾಹಿತ್ಯ ಎಂಬುದು ಕೇವಲ ಕಥೆ, ಕಾದಂಬರಿ,ನಾಟಕ ಮಾತ್ರ ಅಲ್ಲ. ಅದು ಬದುಕನ್ನು ಉದ್ದೀಪನಗೊಳಿಸಬೇಕು. ಅದಕ್ಕಾಗಿ ಆಹಾರ, ಪರಿಸರ, ಮನೋ, ಸಾಮಾಜಿಕ ವಿಜ್ಞಾನದ ಬಗ್ಗೆ ಸಾಹಿತ್ಯ ಕನ್ನಡದಲ್ಲಿ ಬೇಕು‌ ಎಂದರು.

Advertisement

ಸ್ವಾಗತಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಇಂದಿನ ಸಾಹಿತ್ಯಕ್ಕೆ ನೈತಿಕತೆಯ ಸ್ಪರ್ಶ ಬೇಕಾಗಿದೆ. ನಮ್ಮ ನಡೆ- ನುಡಿಯಲ್ಲಿ ನೈತಿಕತೆಯೆಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಒಳ್ಳೆಯ ಸಾಹಿತ್ಯವನ್ನು ಓದುವ ವರ್ಗ ನಮ್ಮ ನಡುವೆ ಯಾವತ್ತೂ ಇದೆ. ಅದಕ್ಕನುಗುಣವಾಗಿ ಸಾಹಿತ್ಯ ರಚಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಅನಿಸುತ್ತದೆ. ಈ ಕುರಿತ ಚಿಂತನೆ ಈ ಸಮ್ಮೇಳನದಲ್ಲಿ ನಡೆಯುತ್ತದೆ. ಸಮ್ಮೇಳನಗಳು ಧರ್ಮ, ವಿಜ್ಞಾನ ಮತ್ತು ಸಾಹಿತ್ಯದ ಸದಾಶಯಗಳ ಸ್ವರೂಪ ತಿಳಿದುಕೊಳ್ಳಲು ಪೂರಕವಾಗುತ್ತದೆ ಎಂದರು. ಬಳಿಕ ಸಾಹಿತ್ಯ ಮತ್ತು ವಿಶ್ವಮಾನವ ಪ್ರಜ್ಞೆಯ ಬಗ್ಗೆ ಸಾಹಿತಿ ಶ್ರೀಧರ ಬಳಗಾರ, ಅಕ್ಷರ ಪ್ರಪಂಚ ಮತ್ತು ಸತ್ಯದರ್ಶನದ ಕುರಿತು ಡಾ. ವೀಣಾ ಬನ್ನಂಜೆ, ರಂಗಭೂಮಿಯಲ್ಲಿ ಹಾಸ್ಯದ ಬಗ್ಗೆ ವಾಗ್ಮಿ ರಿಚರ್ಡ್ ಲೂಯಿಸ್ ಉಪನ್ಯಾಸ ನೀಡಿದರು.

Advertisement

ವೇದಿಕೆಯಲ್ಲಿ ಹೇಮಾವತಿ ವೀ. ಹೆಗ್ಗಡೆ, ಫ್ರೋ. ಪ್ರಭಾಕರ, ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್ ಇದ್ದರು. ಉದ್ಘಾಟಕರ ಸಮ್ಮಾನ ಪತ್ರವನ್ನು ಡಾ. ಬಿ. ಯಶೋವರ್ಮ, ಅಧ್ಯಕ್ಷರ ಸಮ್ಮಾನ ಪತ್ರವನ್ನು ಡಿ. ಶ್ರೇಯಸ್ ಕುಮಾರ್ ವಾಚಿಸಿದರು. ರುಡ್ ಸೆಟ್ ನಿರ್ದೇಶಕ ವಿನಯಕುಮಾರ್ ವಂದಿಸಿದರು. ಡಾ. ಬಿ.ಪಿ‌. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

21 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago