ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…