ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…