ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…