ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…