Advertisement
ಸುದ್ದಿಗಳು

ಭಿತ್ತಿಪತ್ರ, ಸಾಮಾಜಿಕ ಜಾಲತಾಣಗಳ ಮೂಲಕ ತೇಜೋವಧೆ : ಸೈಬರ್ ಸೆಲ್ ಗೆ ದೂರು : ಕ್ರಮಕ್ಕೆ ಒತ್ತಾಯ

Share

ಸುಳ್ಯ :  ಭಿತ್ತಿಪತ್ರಗಳ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಕೆಲವು ಕಿಡಿಗೇಡಿಗಳು ತನ್ನ ವೈಯುಕ್ತಿಕ ತೇಜೋವಧೆಗೆ ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಪೊಲೀಸ್ ಇಲಾಖೆಗೆ ಮತ್ತು ಸೈಬರ್ ಸೆಲ್‍ನವರಿಗೆ ದೂರು ನೀಡಲಾಗಿದೆ. ಈ ರೀತಿ ಅಪಪ್ರಚಾರ ಮಾಡುವವರನ್ನು ಪತ್ತೆ ಹಚ್ಚಿ ಇವರ ವಿರುದ್ಧ ಇಲಾಖೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸುಳ್ಯ ತಾಲೂಕು ಪಂಚಾಯತ್  ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದ್ದಾರೆ.

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾರ್ವಜನಿಕ ಬದುಕಿನಲ್ಲಿ ಪ್ರಾಮಾಣಿಕವಾಗಿ ಮತ್ತು ಭ್ರಷ್ಟಾಚಾರ ರಹಿತವಾಗಿ ಜನ ಸೇವೆ ಮಾಡಿದ್ದೇನೆ. ತನ್ನ ಏಳಿಗೆಯನ್ನು ಸಹಿಸದೆ ಮತ್ತು ರಾಜಕೀಯ ಉದ್ದೇಶಗಳಿಗಾಗಿ ಈ ರೀತಿಯ ಅಪಪ್ರಚಾರ ಮಾಡುತ್ತಿರಬಹುದು. ತನ್ನ ಮೇಲೆ ಯಾವುದಾದರೂ ರೀತಿಯ ಆರೋಪಗಳಿದ್ದರೆ ಅದರ ಬಗ್ಗೆ ತನಿಖೆ ನಡೆಸಲಿ. ಯಾವುದೇ ರೀತಿಯ ತನಿಖೆಯನ್ನು ಎದುರಿಸಲು ಸಿದ್ಧ. ಆದರೆ ಈ ರೀತಿ ಅಪ ಪ್ರಚಾರ ಮಾಡಿದ ಕಾರಣ ಮನಸಿಗೆ ಭಾರೀ ನೋವು ಮತ್ತು ಬೇಷರ ಆಗಿದೆ. ಅಪಪ್ರಚಾರ ಮಾಡಿ ರಾಜಕೀಯದಿಂದ ಹಿಂದೆ ಸರಿಸುವ ಪಿತೂರಿ ಮಾಡಿರುವ ಸಾಧ್ಯತೆಯೂ ಇದೆ. ಯಾವುದೇ ಕಾರಣಕ್ಕೂ ರಾಜಕೀಯ ಕ್ಷೇತ್ರದಿಂದ ಮತ್ತು ಸಾರ್ವಜನಿಕ ಬದುಕಿನಿಂದ ಹಿಂದೆ ಸರಿಯುವುದಿಲ್ಲ. ನನಗೆ ಎಷ್ಟು ಸಾಧ್ಯವೋ ಅಷ್ಟು ಜನ ಸೇವೆಯನ್ನು ಮುಂದೆಯೂ ಮಾಡುತ್ತೇನೆ ಎಂದು ಹೇಳೀದರು.

ಮಹಿಳಾ ಮೋರ್ಚಾ ಖಂಡನೆ:
ಈ ರೀತಿ ಅಪಪ್ರಚಾರ ಮಾಡುವುದನ್ನು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ತೀವ್ರವಾಗಿ ಖಂಡಿಸುತ್ತದೆ ಎಂದು ಮಹಿಳಾ ಮೋರ್ಚಾ ಮುಖಂಡೆ ಹಾಗು ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ ಹೇಳಿದ್ದಾರೆ. ಈ ರೀತಿ ಅಪಪ್ರಚಾರ ಮಾಡುವವರನ್ನು ಪತ್ತೆ ಹಚ್ಚಿ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯರಾದ ಪುಷ್ಪಾ ಮೇದಪ್ಪ, ಜಾಹ್ನವಿ ಕಾಂಚೋಡು, ಎಡಮಂಗಲ ಗ್ರಾ.ಪಂ.ಉಪಾಧ್ಯಕ್ಷೆ ಮೋಹಿನಿ, ವೇದಾವತಿ ಮಾಣಿಬೆಟ್ಟು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

49 minutes ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

6 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

13 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

22 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago