ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾರಂಭದಲ್ಲಿ ಡಿ.24 ರಂದು ಸಾಹಿತಿ, ಜ್ಯೋತಿಷಿಯಾಗಿರುವ ಹೆಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಪರಿವರ್ತನೆ ಚಲನಚಿತ್ರ ಮತ್ತು ಅನುಮಾನ ಕಿರುಚಿತ್ರ ಯಶಸ್ವೀ ಪ್ರದರ್ಶನಗೊಂಡವು .
ಹೆಚ್. ಭೀಮರಾವ್ ವಾಷ್ಠರ್ ರವರು ಪ್ರದರ್ಶನ ಮುಂಚೆ ಚಿತ್ರಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.
ಸುಳ್ಯ ನಗರ ಅಷ್ಟೇ ಅಲ್ಲದೆ ವಿಜಯಪುರ, ಮಹಾರಾಷ್ಟ್ರದ ಪಂಢರಾಪುರ, ಮಂಡ್ಯದ ಕೆ.ಆರ್.ಎಸ್. ಹಾಗೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾದ ನಯನ ಮನೋಹರ ದೃಶ್ಯಗಳು ಮನತಣಿಸಿದವು.
ಸಂದೇಶ ಭರಿತ ಸಂಪೂರ್ಣ ಚಿತ್ರಗಳನ್ನು ಬೃಹತ್ ಎಲ್ಈಡಿ ಪರದೆಯಲ್ಲಿ ಬಿತ್ತರಿಸಲಾಯಿತು. ಪ್ರದರ್ಶನ ಆದ ಬಳಿಕ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ್ ಪೇರಾಲು ಮತ್ತು ದಿನೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…