ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾರಂಭದಲ್ಲಿ ಡಿ.24 ರಂದು ಸಾಹಿತಿ, ಜ್ಯೋತಿಷಿಯಾಗಿರುವ ಹೆಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಪರಿವರ್ತನೆ ಚಲನಚಿತ್ರ ಮತ್ತು ಅನುಮಾನ ಕಿರುಚಿತ್ರ ಯಶಸ್ವೀ ಪ್ರದರ್ಶನಗೊಂಡವು .
ಹೆಚ್. ಭೀಮರಾವ್ ವಾಷ್ಠರ್ ರವರು ಪ್ರದರ್ಶನ ಮುಂಚೆ ಚಿತ್ರಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.
ಸುಳ್ಯ ನಗರ ಅಷ್ಟೇ ಅಲ್ಲದೆ ವಿಜಯಪುರ, ಮಹಾರಾಷ್ಟ್ರದ ಪಂಢರಾಪುರ, ಮಂಡ್ಯದ ಕೆ.ಆರ್.ಎಸ್. ಹಾಗೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾದ ನಯನ ಮನೋಹರ ದೃಶ್ಯಗಳು ಮನತಣಿಸಿದವು.
ಸಂದೇಶ ಭರಿತ ಸಂಪೂರ್ಣ ಚಿತ್ರಗಳನ್ನು ಬೃಹತ್ ಎಲ್ಈಡಿ ಪರದೆಯಲ್ಲಿ ಬಿತ್ತರಿಸಲಾಯಿತು. ಪ್ರದರ್ಶನ ಆದ ಬಳಿಕ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ್ ಪೇರಾಲು ಮತ್ತು ದಿನೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…