ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾರಂಭದಲ್ಲಿ ಡಿ.24 ರಂದು ಸಾಹಿತಿ, ಜ್ಯೋತಿಷಿಯಾಗಿರುವ ಹೆಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಪರಿವರ್ತನೆ ಚಲನಚಿತ್ರ ಮತ್ತು ಅನುಮಾನ ಕಿರುಚಿತ್ರ ಯಶಸ್ವೀ ಪ್ರದರ್ಶನಗೊಂಡವು .
ಹೆಚ್. ಭೀಮರಾವ್ ವಾಷ್ಠರ್ ರವರು ಪ್ರದರ್ಶನ ಮುಂಚೆ ಚಿತ್ರಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.
ಸುಳ್ಯ ನಗರ ಅಷ್ಟೇ ಅಲ್ಲದೆ ವಿಜಯಪುರ, ಮಹಾರಾಷ್ಟ್ರದ ಪಂಢರಾಪುರ, ಮಂಡ್ಯದ ಕೆ.ಆರ್.ಎಸ್. ಹಾಗೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾದ ನಯನ ಮನೋಹರ ದೃಶ್ಯಗಳು ಮನತಣಿಸಿದವು.
ಸಂದೇಶ ಭರಿತ ಸಂಪೂರ್ಣ ಚಿತ್ರಗಳನ್ನು ಬೃಹತ್ ಎಲ್ಈಡಿ ಪರದೆಯಲ್ಲಿ ಬಿತ್ತರಿಸಲಾಯಿತು. ಪ್ರದರ್ಶನ ಆದ ಬಳಿಕ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ್ ಪೇರಾಲು ಮತ್ತು ದಿನೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…