ಭೂಕುಸಿತದ ಇಫೆಕ್ಟ್ ಇದು : ಮಳೆ ಬಂದಾಗ ಪಯಸ್ವಿನಿಯಲ್ಲಿ ಕೆಸರು ನೀರಿನ ಆತಂಕ

Share

ಸುಳ್ಯ: ಸಣ್ಣ ಮಳೆ ಬಂದಾಗ ಪಯಸ್ವಿನಿ ನದಿಯಲ್ಲಿ ಕೆಸರು ನೀರು ಹರಿಯುತ್ತಿದೆ. ಇದು ಈಗ ನದಿ ಪಾತ್ರದ ಜನರಿಗೆ ಆತಂಕಕ್ಕೆ ಕಾರಣವಾಗಿದೆ.
ಕಳೆದ ಮಳೆಗಾಲದ ಅವಧಿಯಲ್ಲಿ ಸಂಪಾಜೆ , ಮಡಿಕೇರಿ ಭಾಗದಲ್ಲಿ ಭೂಕುಸಿತದ ಪರಿಣಾಮವಾಗಿ ಸಂಪಾಜೆ, ಊರುಬೈಲು, ಚೆಂಬು, ಸಂಪಾಜೆ ಗ್ರಾಮಗಳಲ್ಲಿ ಪಯಸ್ವಿನಿ ನದಿಯ ಸ್ವರೂಪದಲ್ಲೇ ಬದಲಾವಣೆ ಉಂಟಾಗಿದೆ. ಇದೀಗ ಬೇಸಿಗೆಯಲ್ಲಿ ಸುರಿದ ಮಳೆಯಲ್ಲಿಯೇ ನೀರಿನ ಜೊತೆಯಲ್ಲಿ ಕೆಸರು, ಮರಳು, ಮಣ್ಣು ಹರಿದು ಬರುತಿದೆ. ಇದರಿಂದ ನೀರು ಕೃಷಿಗೆ ನೀರು ಹಾಯಿಸಲು ನದಿಯಲ್ಲಿ ಅಲ್ಲಲ್ಲಿ ಕೃಷಿಕರು ತೋಡಿದ ಹೊಂಡಗಳು ಮುಚ್ಚಿ ಹೋಗುತಿದೆ. ಈ ಹೊಂಡಗಳಲ್ಲಿ ಪಂಪ್ ಇರಿಸಿ ನೀರು ಪಂಪ್ ಮಾಡಿ ಕೃಷಿಗೆ ನೀರು ಹಾಯಿಸುತ್ತಿದ್ದರು. ಆದರೆ ಕೆಸರು ಮಣ್ಣು ಬರುವ ಕಾರಣ ಈ ಹೊಂಡಗಳು ದಿನಂಪ್ರತಿ ಮುಚ್ಚಿ ಹೋಗಿ ಪಂಪ್‍ಗಳು ಕೆಸರಲ್ಲಿ ಮುಳುಗುತ್ತಿದೆ. ಪ್ರತಿ ದಿನ ಹೊಂಡ ತೋಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಹರಿವು ಹೆಚ್ಚಾದರೂ ಕೆಸರು ನೀರು ಬರುವುದು ಸಮಸ್ಯೆ ಸೃಷ್ಠಿಸುತಿದೆ ಎನ್ನುತ್ತಾರೆ ಕೃಷಿಕರು. ಇನ್ನು ನದಿಯಲ್ಲಿ ಒಂದು ಬದಿಯಲ್ಲಿ ಹರಿಯುತ್ತಿದ್ದ ನೀರು ಮರಳು, ಮಣ್ಣು ತುಂಬಿ ದಿನ ಕಳೆದಂತೆ ಹರಿವಿನ ದಿಕ್ಕನ್ನು ಮತ್ತೊಂದೆಡೆ ಬದಲಿಸಿ ನದಿಯ ಸ್ವರೂಪವೇ ಬದಲಾಗುತ್ತಿದೆ. ಕಳೆದ ಮಳೆಗಾಲದಲ್ಲಿ ಎರಡನೇ ಮೊಣ್ಣಂಗೇರಿ, ಜೋಡುಪಾಲದಲ್ಲಿ ಉಂಟಾದ ಪ್ರಳಯ ಮತ್ತು ಭೂಕುಸಿತದಿಂದ ಹರಿದು ಬಂದ ಟನ್ ಗಟ್ಟಲೆ ಕೆಸರು, ಮರಳು, ಮಣ್ಣು ನದಿಯಲ್ಲಿದ್ದ ಬೃಹತ್ ಗಾತ್ರದ ಹೊಂಡಗಳನ್ನು ತುಂಬಿಸಿ ನದಿಯ ಒಡಲನ್ನು ಸಮಾನಾಂತರವಾಗಿಸಿತು. ಇದರಿಂದ ನದಿಯ ಒಡಲಿನ ನೀರಿನ ಶೇಖರಣೆಯೇ ಕಡಿಮೆಯಾಗಿ ಬಸಿಗೆಯಲ್ಲಿ ನೀರಿನ ಕೊರತೆ ಎದುರಾಗಿತ್ತು. ಈ ವರ್ಷವೂ ನದಿಯ ನೀರಿನ ಜೊತೆಗೆ ಮೇಲ್ಭಾಗದಿಂದ ಹರಿದು ಬರುವ ಮಣ್ಣು, ಮರಳು ನದೀಪಾತ್ರವನ್ನು ತುಂಬುವ ಆತಂಕ ಎದುರಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

14 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

14 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

14 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

14 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

14 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

14 hours ago