ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬಂಧಿಸಿದ ಬೆಂಗಳೂರು ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಹಿನ್ನೆಲೆಯಲ್ಲಿ ಪೊಲೀಸರ ಬೇಡಿಕೆಯಂತೆ ನ್ಯಾಯಾಲಯವು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು ದಕ್ಷಿಣ ಆಫ್ರಿಕಾದ ಸೆನೆಗಲ್ನಿಂದ ಬೆಂಗಳೂರಿಗೆ ಕರೆತಂದಿದ್ದರು. ಸೋಮವಾರ ಆತನನ್ನು 1ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಿದರು. ಈಗ ಸಿಸಿಬಿ ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 90ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 39 ಪ್ರಕರಣಗಳು , ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11 ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ಕೋಲಾರದಲ್ಲೂ ಪ್ರಕರಣಗಳಿವೆ. 15 ವರ್ಷಗಳಿಂದ ರವಿ ಪೂಜಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಚೋಟಾ ರಾಜನ್ ಸಹಚರನಾಗಿದ್ದ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡು ಹಲವಾರು ಪಾತಕ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವಾರು ಪ್ರಕರಣಗಳು ಈತನ ವಿರುದ್ಧವಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…