ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬಂಧಿಸಿದ ಬೆಂಗಳೂರು ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಹಿನ್ನೆಲೆಯಲ್ಲಿ ಪೊಲೀಸರ ಬೇಡಿಕೆಯಂತೆ ನ್ಯಾಯಾಲಯವು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು ದಕ್ಷಿಣ ಆಫ್ರಿಕಾದ ಸೆನೆಗಲ್ನಿಂದ ಬೆಂಗಳೂರಿಗೆ ಕರೆತಂದಿದ್ದರು. ಸೋಮವಾರ ಆತನನ್ನು 1ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಿದರು. ಈಗ ಸಿಸಿಬಿ ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 90ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 39 ಪ್ರಕರಣಗಳು , ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11 ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ಕೋಲಾರದಲ್ಲೂ ಪ್ರಕರಣಗಳಿವೆ. 15 ವರ್ಷಗಳಿಂದ ರವಿ ಪೂಜಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಚೋಟಾ ರಾಜನ್ ಸಹಚರನಾಗಿದ್ದ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡು ಹಲವಾರು ಪಾತಕ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವಾರು ಪ್ರಕರಣಗಳು ಈತನ ವಿರುದ್ಧವಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…