ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬಂಧಿಸಿದ ಬೆಂಗಳೂರು ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಹಿನ್ನೆಲೆಯಲ್ಲಿ ಪೊಲೀಸರ ಬೇಡಿಕೆಯಂತೆ ನ್ಯಾಯಾಲಯವು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು ದಕ್ಷಿಣ ಆಫ್ರಿಕಾದ ಸೆನೆಗಲ್ನಿಂದ ಬೆಂಗಳೂರಿಗೆ ಕರೆತಂದಿದ್ದರು. ಸೋಮವಾರ ಆತನನ್ನು 1ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಹಾಜರುಪಡಿಸಿದರು. ಈಗ ಸಿಸಿಬಿ ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 90ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 39 ಪ್ರಕರಣಗಳು , ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11 ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ಕೋಲಾರದಲ್ಲೂ ಪ್ರಕರಣಗಳಿವೆ. 15 ವರ್ಷಗಳಿಂದ ರವಿ ಪೂಜಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಚೋಟಾ ರಾಜನ್ ಸಹಚರನಾಗಿದ್ದ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡು ಹಲವಾರು ಪಾತಕ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವಾರು ಪ್ರಕರಣಗಳು ಈತನ ವಿರುದ್ಧವಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…