ಸುಳ್ಯ: ಲಂಚ ಪಡೆಯುತ್ತಿದ್ದ ಸುಳ್ಯದ ಉಪನೋಂದಣಾಧಿಕಾರಿ ಕಚೇರಿಯ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆದೇಶ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ವಿಷಯ ಪ್ರಸ್ತಾಪಿಸಿದರು. ಅಧಿಕಾರಿ ಲಂಚ ಪಡೆಯುತ್ತಿರುವ ವೀಡಿಯೋ ಮಾಧ್ಯಮಗಳ ಮೂಲಕ ಹೊರ ಬಂದಿದೆ ಮತ್ತು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದರು. ಇದಕ್ಕೆ ಗರಂ ಆದ ಐವನ್ ಡಿಸೋಜ ಈ ರೀತಿಯ ಅಧಿಕಾರಿಗಳನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಹಾಯಕ ಕಮೀಷನರ್ ರಿಗೆ ಆದೇಶ ನೀಡಿದರು.
ಕ್ರಮ ಕೈಗೊಳ್ಳಲಾಗಿದ್ದು ಕೂಡಲೇ ಕ್ರಮ ಆಗಲಿದೆ ಎಂದು ಸಹಾಯಕ ಕಮೀಶನರ್ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾಗಿ ಶಾಸಕ ಅಂಗಾರ ಸಭೆಯಲ್ಲಿ ಹೇಳಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲ ಬೇಡಿಕೆ ಕೇಳಿ ಬಂತು.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…