ಸುಳ್ಯ: ಲಂಚ ಪಡೆಯುತ್ತಿದ್ದ ಸುಳ್ಯದ ಉಪನೋಂದಣಾಧಿಕಾರಿ ಕಚೇರಿಯ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆದೇಶ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ವಿಷಯ ಪ್ರಸ್ತಾಪಿಸಿದರು. ಅಧಿಕಾರಿ ಲಂಚ ಪಡೆಯುತ್ತಿರುವ ವೀಡಿಯೋ ಮಾಧ್ಯಮಗಳ ಮೂಲಕ ಹೊರ ಬಂದಿದೆ ಮತ್ತು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದರು. ಇದಕ್ಕೆ ಗರಂ ಆದ ಐವನ್ ಡಿಸೋಜ ಈ ರೀತಿಯ ಅಧಿಕಾರಿಗಳನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಹಾಯಕ ಕಮೀಷನರ್ ರಿಗೆ ಆದೇಶ ನೀಡಿದರು.
ಕ್ರಮ ಕೈಗೊಳ್ಳಲಾಗಿದ್ದು ಕೂಡಲೇ ಕ್ರಮ ಆಗಲಿದೆ ಎಂದು ಸಹಾಯಕ ಕಮೀಶನರ್ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾಗಿ ಶಾಸಕ ಅಂಗಾರ ಸಭೆಯಲ್ಲಿ ಹೇಳಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲ ಬೇಡಿಕೆ ಕೇಳಿ ಬಂತು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…