ಸುಳ್ಯ: ಲಂಚ ಪಡೆಯುತ್ತಿದ್ದ ಸುಳ್ಯದ ಉಪನೋಂದಣಾಧಿಕಾರಿ ಕಚೇರಿಯ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆದೇಶ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ವಿಷಯ ಪ್ರಸ್ತಾಪಿಸಿದರು. ಅಧಿಕಾರಿ ಲಂಚ ಪಡೆಯುತ್ತಿರುವ ವೀಡಿಯೋ ಮಾಧ್ಯಮಗಳ ಮೂಲಕ ಹೊರ ಬಂದಿದೆ ಮತ್ತು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದರು. ಇದಕ್ಕೆ ಗರಂ ಆದ ಐವನ್ ಡಿಸೋಜ ಈ ರೀತಿಯ ಅಧಿಕಾರಿಗಳನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಹಾಯಕ ಕಮೀಷನರ್ ರಿಗೆ ಆದೇಶ ನೀಡಿದರು.
ಕ್ರಮ ಕೈಗೊಳ್ಳಲಾಗಿದ್ದು ಕೂಡಲೇ ಕ್ರಮ ಆಗಲಿದೆ ಎಂದು ಸಹಾಯಕ ಕಮೀಶನರ್ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾಗಿ ಶಾಸಕ ಅಂಗಾರ ಸಭೆಯಲ್ಲಿ ಹೇಳಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲ ಬೇಡಿಕೆ ಕೇಳಿ ಬಂತು.
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…