ವಿಶೇಷ ವರದಿಗಳು

ಮಂಗನ ಓಡಿಸುವ ಇನ್ನೊಂದು ಸುಲಭ ಪ್ರಯತ್ನ…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್ ಬೇಕಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಇದೀಗ ಕಾಸರಗೋಡು ಜಿಲ್ಲೆಯ ಕಿನ್ನಿಂಗಾರಿನ ರಾಜಗೋಪಾಲ ಕೈಪಂಗಳ ಅವರು ಹೊಸದೊಂದು ಪ್ರಯತ್ನ ಮಾಡಿದ್ದಾರೆ. ಈ ಸುಲಭ ಉಪಕರಣದ ಮೂಲಕ ಈಗಲೂ ಕೃಷಿ ಭೂಮಿಯಲ್ಲಿ ಈ ಬಗ್ಗೆ ಪರೀಕ್ಷೆ ಮಾಡುತ್ತಿದ್ದಾರೆ. ಇತರ ಕೃಷಿಕರೂ ಈ ಸುಲಭ ವಿಧಾನದಲ್ಲಿ ಪ್ರಯತ್ನ ಮಾಡಬಹುದಾಗಿದೆ. ಇದರ ವಿಡಿಯೋ ಇಲ್ಲಿದೆ:

Advertisement
Advertisement

 

ಈ ಸುಲಭ ಉಪಕರಣದಲ್ಲಿ ಕಾರು ಅಥವಾ ಬೈಕ್ ಟ್ಯೂಬ್ ಬಳಕೆ ಮಾಡಿಕೊಂಡು ಅದಕ್ಕೆ ಗಾಳಿ ತುಂಬಿ ಪ್ಯಾನ್ಸಿ ಅಂಗಡಿಯಲ್ಲಿ  ದೊರೆಯುವ ಹಾರ್ನ್ ಮಾದರಿಯ ಆಟಿಕೆಗೆ ಪೈಪ್ ಮೂಲಕ ಗಾಳಿ ಹೋಗುವಂತೆ ಮಾಡಿ ಮಂಗಗಳ ಹಿಂಡು ಇರುವ ಕಡೆ ಈ ಸದ್ದು ಕೇಳಿಸುವುದು ಇಲ್ಲಿನ ಉಪಾಯ. ಎಲ್ಲಾ ಕೃಷಿಕರೂ ಈ ಪ್ರಯತ್ನ ಮಾಡಬಹುದು ಎನ್ನುತ್ತಾರೆ ರಾಜಗೋಪಾಲ್ ಅವರು.

Advertisement

ರಾಜಗೋಪಾಲ ಕೈಪಂಗಳ ಅವರು ಕೃಷಿಕರಿಗೆ ಉಪಯುಕ್ತವಾಗುವ ಇಂತಹ ಹಲವು ಉಪಕರಣ ಮಾಡಿದ್ದಾರೆ. ಅದರಲ್ಲಿ  ಆನೆ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಸಿದ್ಧ ಮಾಡಿರುವ ಎಲ್ ಇ ಡಿ ಆಧಾರಿತ ಲೈಟ್  ಗಮನಸೆಳೆದಿದೆ. ಕೇರಳದ ಅರಣ್ಯ ಇಲಾಖೆ ಆನೆ ಹಾವಳಿ ತಡೆಗೆ ಈ ಲೈಟ್ ಉಪಯುಕ್ತವಾಗಿದೆ ಎಂದು ಹೇಳಿದೆ.

ಕೃಷಿಕನಾಗಿರುವುದರಿಂದ ಕೃಷಿಕರ ಸಂಕಷ್ಟ ಅರಿವಿದೆ. ಹೀಗಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ವಿವಿಧ ಪ್ರಯತ್ನ ಮಾಡುತ್ತಲೇ ಇದ್ದೇನೆ. ಇದು ಮಂಗಗಳನ್ನು ತೋಟದಿಂದ ಓಡಿಸಲು ಮಾಡಿರುವ ಒಂದು ಪ್ರಯತ್ನ. ಈಗ ಇದರ ಸಾಧಕ ಬಾಧಕಗಳ ಬಗ್ಗೆಯೂ ಗಮನಿಸಲಾಗುತ್ತಿದೆ. ಇತರ ಕೃಷಿಕರೂ ಈ ವಿಧಾನ ಮಾಡಿ ಪ್ರಯತ್ನ ಮಾಡಬಹುದು. – ರಾಜಗೋಪಾಲ ಕೈಪಂಗಳ

ರಾಜಗೋಪಾಲ್ ಕೈಪಂಗಳ  ಅವರ ಸಂಪರ್ಕಕ್ಕೆ : 9061674679

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

10 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

11 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

11 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

12 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

19 hours ago