Advertisement
ವಿಶೇಷ ವರದಿಗಳು

ಮಂಗನ ಓಡಿಸುವ ಇನ್ನೊಂದು ಸುಲಭ ಪ್ರಯತ್ನ…..

Share

ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್ ಬೇಕಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಇದೀಗ ಕಾಸರಗೋಡು ಜಿಲ್ಲೆಯ ಕಿನ್ನಿಂಗಾರಿನ ರಾಜಗೋಪಾಲ ಕೈಪಂಗಳ ಅವರು ಹೊಸದೊಂದು ಪ್ರಯತ್ನ ಮಾಡಿದ್ದಾರೆ. ಈ ಸುಲಭ ಉಪಕರಣದ ಮೂಲಕ ಈಗಲೂ ಕೃಷಿ ಭೂಮಿಯಲ್ಲಿ ಈ ಬಗ್ಗೆ ಪರೀಕ್ಷೆ ಮಾಡುತ್ತಿದ್ದಾರೆ. ಇತರ ಕೃಷಿಕರೂ ಈ ಸುಲಭ ವಿಧಾನದಲ್ಲಿ ಪ್ರಯತ್ನ ಮಾಡಬಹುದಾಗಿದೆ. ಇದರ ವಿಡಿಯೋ ಇಲ್ಲಿದೆ:

 

ಈ ಸುಲಭ ಉಪಕರಣದಲ್ಲಿ ಕಾರು ಅಥವಾ ಬೈಕ್ ಟ್ಯೂಬ್ ಬಳಕೆ ಮಾಡಿಕೊಂಡು ಅದಕ್ಕೆ ಗಾಳಿ ತುಂಬಿ ಪ್ಯಾನ್ಸಿ ಅಂಗಡಿಯಲ್ಲಿ  ದೊರೆಯುವ ಹಾರ್ನ್ ಮಾದರಿಯ ಆಟಿಕೆಗೆ ಪೈಪ್ ಮೂಲಕ ಗಾಳಿ ಹೋಗುವಂತೆ ಮಾಡಿ ಮಂಗಗಳ ಹಿಂಡು ಇರುವ ಕಡೆ ಈ ಸದ್ದು ಕೇಳಿಸುವುದು ಇಲ್ಲಿನ ಉಪಾಯ. ಎಲ್ಲಾ ಕೃಷಿಕರೂ ಈ ಪ್ರಯತ್ನ ಮಾಡಬಹುದು ಎನ್ನುತ್ತಾರೆ ರಾಜಗೋಪಾಲ್ ಅವರು.

ರಾಜಗೋಪಾಲ ಕೈಪಂಗಳ ಅವರು ಕೃಷಿಕರಿಗೆ ಉಪಯುಕ್ತವಾಗುವ ಇಂತಹ ಹಲವು ಉಪಕರಣ ಮಾಡಿದ್ದಾರೆ. ಅದರಲ್ಲಿ  ಆನೆ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಸಿದ್ಧ ಮಾಡಿರುವ ಎಲ್ ಇ ಡಿ ಆಧಾರಿತ ಲೈಟ್  ಗಮನಸೆಳೆದಿದೆ. ಕೇರಳದ ಅರಣ್ಯ ಇಲಾಖೆ ಆನೆ ಹಾವಳಿ ತಡೆಗೆ ಈ ಲೈಟ್ ಉಪಯುಕ್ತವಾಗಿದೆ ಎಂದು ಹೇಳಿದೆ.

ಕೃಷಿಕನಾಗಿರುವುದರಿಂದ ಕೃಷಿಕರ ಸಂಕಷ್ಟ ಅರಿವಿದೆ. ಹೀಗಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ವಿವಿಧ ಪ್ರಯತ್ನ ಮಾಡುತ್ತಲೇ ಇದ್ದೇನೆ. ಇದು ಮಂಗಗಳನ್ನು ತೋಟದಿಂದ ಓಡಿಸಲು ಮಾಡಿರುವ ಒಂದು ಪ್ರಯತ್ನ. ಈಗ ಇದರ ಸಾಧಕ ಬಾಧಕಗಳ ಬಗ್ಗೆಯೂ ಗಮನಿಸಲಾಗುತ್ತಿದೆ. ಇತರ ಕೃಷಿಕರೂ ಈ ವಿಧಾನ ಮಾಡಿ ಪ್ರಯತ್ನ ಮಾಡಬಹುದು. – ರಾಜಗೋಪಾಲ ಕೈಪಂಗಳ

ರಾಜಗೋಪಾಲ್ ಕೈಪಂಗಳ  ಅವರ ಸಂಪರ್ಕಕ್ಕೆ : 9061674679

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

15 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

22 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago