Advertisement
ವಿಶೇಷ ವರದಿಗಳು

ಮಂಗನ ಓಡಿಸುವ ಇನ್ನೊಂದು ಸುಲಭ ಪ್ರಯತ್ನ…..

Share

ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್ ಬೇಕಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಇದೀಗ ಕಾಸರಗೋಡು ಜಿಲ್ಲೆಯ ಕಿನ್ನಿಂಗಾರಿನ ರಾಜಗೋಪಾಲ ಕೈಪಂಗಳ ಅವರು ಹೊಸದೊಂದು ಪ್ರಯತ್ನ ಮಾಡಿದ್ದಾರೆ. ಈ ಸುಲಭ ಉಪಕರಣದ ಮೂಲಕ ಈಗಲೂ ಕೃಷಿ ಭೂಮಿಯಲ್ಲಿ ಈ ಬಗ್ಗೆ ಪರೀಕ್ಷೆ ಮಾಡುತ್ತಿದ್ದಾರೆ. ಇತರ ಕೃಷಿಕರೂ ಈ ಸುಲಭ ವಿಧಾನದಲ್ಲಿ ಪ್ರಯತ್ನ ಮಾಡಬಹುದಾಗಿದೆ. ಇದರ ವಿಡಿಯೋ ಇಲ್ಲಿದೆ:

 

ಈ ಸುಲಭ ಉಪಕರಣದಲ್ಲಿ ಕಾರು ಅಥವಾ ಬೈಕ್ ಟ್ಯೂಬ್ ಬಳಕೆ ಮಾಡಿಕೊಂಡು ಅದಕ್ಕೆ ಗಾಳಿ ತುಂಬಿ ಪ್ಯಾನ್ಸಿ ಅಂಗಡಿಯಲ್ಲಿ  ದೊರೆಯುವ ಹಾರ್ನ್ ಮಾದರಿಯ ಆಟಿಕೆಗೆ ಪೈಪ್ ಮೂಲಕ ಗಾಳಿ ಹೋಗುವಂತೆ ಮಾಡಿ ಮಂಗಗಳ ಹಿಂಡು ಇರುವ ಕಡೆ ಈ ಸದ್ದು ಕೇಳಿಸುವುದು ಇಲ್ಲಿನ ಉಪಾಯ. ಎಲ್ಲಾ ಕೃಷಿಕರೂ ಈ ಪ್ರಯತ್ನ ಮಾಡಬಹುದು ಎನ್ನುತ್ತಾರೆ ರಾಜಗೋಪಾಲ್ ಅವರು.

ರಾಜಗೋಪಾಲ ಕೈಪಂಗಳ ಅವರು ಕೃಷಿಕರಿಗೆ ಉಪಯುಕ್ತವಾಗುವ ಇಂತಹ ಹಲವು ಉಪಕರಣ ಮಾಡಿದ್ದಾರೆ. ಅದರಲ್ಲಿ  ಆನೆ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಸಿದ್ಧ ಮಾಡಿರುವ ಎಲ್ ಇ ಡಿ ಆಧಾರಿತ ಲೈಟ್  ಗಮನಸೆಳೆದಿದೆ. ಕೇರಳದ ಅರಣ್ಯ ಇಲಾಖೆ ಆನೆ ಹಾವಳಿ ತಡೆಗೆ ಈ ಲೈಟ್ ಉಪಯುಕ್ತವಾಗಿದೆ ಎಂದು ಹೇಳಿದೆ.

ಕೃಷಿಕನಾಗಿರುವುದರಿಂದ ಕೃಷಿಕರ ಸಂಕಷ್ಟ ಅರಿವಿದೆ. ಹೀಗಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ವಿವಿಧ ಪ್ರಯತ್ನ ಮಾಡುತ್ತಲೇ ಇದ್ದೇನೆ. ಇದು ಮಂಗಗಳನ್ನು ತೋಟದಿಂದ ಓಡಿಸಲು ಮಾಡಿರುವ ಒಂದು ಪ್ರಯತ್ನ. ಈಗ ಇದರ ಸಾಧಕ ಬಾಧಕಗಳ ಬಗ್ಗೆಯೂ ಗಮನಿಸಲಾಗುತ್ತಿದೆ. ಇತರ ಕೃಷಿಕರೂ ಈ ವಿಧಾನ ಮಾಡಿ ಪ್ರಯತ್ನ ಮಾಡಬಹುದು. – ರಾಜಗೋಪಾಲ ಕೈಪಂಗಳ

ರಾಜಗೋಪಾಲ್ ಕೈಪಂಗಳ  ಅವರ ಸಂಪರ್ಕಕ್ಕೆ : 9061674679

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago