Advertisement
ವಿಶೇಷ ವರದಿಗಳು

ಮಂಗನ ಓಡಿಸುವ ಇನ್ನೊಂದು ಸುಲಭ ಪ್ರಯತ್ನ…..

Share

ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್ ಬೇಕಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಇದೀಗ ಕಾಸರಗೋಡು ಜಿಲ್ಲೆಯ ಕಿನ್ನಿಂಗಾರಿನ ರಾಜಗೋಪಾಲ ಕೈಪಂಗಳ ಅವರು ಹೊಸದೊಂದು ಪ್ರಯತ್ನ ಮಾಡಿದ್ದಾರೆ. ಈ ಸುಲಭ ಉಪಕರಣದ ಮೂಲಕ ಈಗಲೂ ಕೃಷಿ ಭೂಮಿಯಲ್ಲಿ ಈ ಬಗ್ಗೆ ಪರೀಕ್ಷೆ ಮಾಡುತ್ತಿದ್ದಾರೆ. ಇತರ ಕೃಷಿಕರೂ ಈ ಸುಲಭ ವಿಧಾನದಲ್ಲಿ ಪ್ರಯತ್ನ ಮಾಡಬಹುದಾಗಿದೆ. ಇದರ ವಿಡಿಯೋ ಇಲ್ಲಿದೆ:

 

ಈ ಸುಲಭ ಉಪಕರಣದಲ್ಲಿ ಕಾರು ಅಥವಾ ಬೈಕ್ ಟ್ಯೂಬ್ ಬಳಕೆ ಮಾಡಿಕೊಂಡು ಅದಕ್ಕೆ ಗಾಳಿ ತುಂಬಿ ಪ್ಯಾನ್ಸಿ ಅಂಗಡಿಯಲ್ಲಿ  ದೊರೆಯುವ ಹಾರ್ನ್ ಮಾದರಿಯ ಆಟಿಕೆಗೆ ಪೈಪ್ ಮೂಲಕ ಗಾಳಿ ಹೋಗುವಂತೆ ಮಾಡಿ ಮಂಗಗಳ ಹಿಂಡು ಇರುವ ಕಡೆ ಈ ಸದ್ದು ಕೇಳಿಸುವುದು ಇಲ್ಲಿನ ಉಪಾಯ. ಎಲ್ಲಾ ಕೃಷಿಕರೂ ಈ ಪ್ರಯತ್ನ ಮಾಡಬಹುದು ಎನ್ನುತ್ತಾರೆ ರಾಜಗೋಪಾಲ್ ಅವರು.

ರಾಜಗೋಪಾಲ ಕೈಪಂಗಳ ಅವರು ಕೃಷಿಕರಿಗೆ ಉಪಯುಕ್ತವಾಗುವ ಇಂತಹ ಹಲವು ಉಪಕರಣ ಮಾಡಿದ್ದಾರೆ. ಅದರಲ್ಲಿ  ಆನೆ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಸಿದ್ಧ ಮಾಡಿರುವ ಎಲ್ ಇ ಡಿ ಆಧಾರಿತ ಲೈಟ್  ಗಮನಸೆಳೆದಿದೆ. ಕೇರಳದ ಅರಣ್ಯ ಇಲಾಖೆ ಆನೆ ಹಾವಳಿ ತಡೆಗೆ ಈ ಲೈಟ್ ಉಪಯುಕ್ತವಾಗಿದೆ ಎಂದು ಹೇಳಿದೆ.

ಕೃಷಿಕನಾಗಿರುವುದರಿಂದ ಕೃಷಿಕರ ಸಂಕಷ್ಟ ಅರಿವಿದೆ. ಹೀಗಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ವಿವಿಧ ಪ್ರಯತ್ನ ಮಾಡುತ್ತಲೇ ಇದ್ದೇನೆ. ಇದು ಮಂಗಗಳನ್ನು ತೋಟದಿಂದ ಓಡಿಸಲು ಮಾಡಿರುವ ಒಂದು ಪ್ರಯತ್ನ. ಈಗ ಇದರ ಸಾಧಕ ಬಾಧಕಗಳ ಬಗ್ಗೆಯೂ ಗಮನಿಸಲಾಗುತ್ತಿದೆ. ಇತರ ಕೃಷಿಕರೂ ಈ ವಿಧಾನ ಮಾಡಿ ಪ್ರಯತ್ನ ಮಾಡಬಹುದು. – ರಾಜಗೋಪಾಲ ಕೈಪಂಗಳ

ರಾಜಗೋಪಾಲ್ ಕೈಪಂಗಳ  ಅವರ ಸಂಪರ್ಕಕ್ಕೆ : 9061674679

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

14 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

14 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago