ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ ಸುಳ್ಯದಿಂದ 500 ಮಂದಿ ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…