ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ ಸುಳ್ಯದಿಂದ 500 ಮಂದಿ ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…