ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ ಸುಳ್ಯದಿಂದ 500 ಮಂದಿ ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…