ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ ಸುಳ್ಯದಿಂದ 500 ಮಂದಿ ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…