Advertisement
ವಿಶೇಷ ವರದಿಗಳು

ಮಂಗಳೂರಿನಲ್ಲಿ ನೀರಿಲ್ಲದೆ ಕಾಲೇಜಿಗೆ ರಜೆ ಕೊಟ್ಟರು …..!

Share

ಮಂಗಳೂರಿನಲ್ಲಿ  ನೀರಿಲ್ಲದೆ ಕಾಲೇಜುಗಳಿಗೆ ರಜೆ ಕೊಟ್ಟರು…! , ಇದು ಅಚ್ಚರಿ ಏಕೆಂದರೆ, ಮಲೆನಾಡಿನ ಅದರಲ್ಲೂ ಕರಾವಳಿ ತೀರದ, ಸಮುದ್ರದ ಹತ್ತಿರದ ಪ್ರದೇಶದಲ್ಲಿ  ನೀರಿಲ್ಲದೆ ಕಾಲೇಜು ಮುಂದುವರಿಸುವುದು  ಹಾಗೂ ಕಾಲೇಜಿಗೆ ರಜೆ ನೀಡುವುದು  ಎನ್ನುವುದೇ ಅಚ್ಚರಿ ಹಾಗೂ ಚಿಂತನೆಗೆ ದೂಡುವ ಸಂಗತಿ.

ಮಂಗಳೂರಿನ ಬಹುತೇಕ ಎಲ್ಲಾ ಪಿಯು ಕಾಲೇಜುಗಳ ಆರಂಭ ಒಂದು ವಾರ ವಿಸ್ತರಣೆಗೊಂಡಿದೆ. ಕಳೆದ ಕೆಲವು ದಿನಗಳಿಂದ ಮಂಗಳೂರಿನಲ್ಲಿ  ಕುಡಿಯುವ ನೀರಿನ ಸಮಸ್ಯೆ ಇತ್ತು. ರೇಶನ್ ಮೂಲಕ ನೀರು ಸರಬರಾಜು ಮಾಡುತ್ತಿದ್ದರು. ಹೀಗಾಗಿ ಕಾಲೇಜುಗಳೂ ಈ  ಸಮಸ್ಯೆಯಿಂದ  ಮುಕ್ತಿಹೊಂದಿರಲಿಲ್ಲ. ಅದಕ್ಕೂ ಹೆಚ್ಚಾಗಿ  ಕೊಳವೆಬಾವಿ, ಬಾವಿಗಳಲ್ಲೂ ನೀರು ಆಳಕ್ಕೆ ಇಳಿದಿದಿತ್ತು. ಒಂದೊಮ್ಮೆ ಒಂದೇ ವಾರಕ್ಕೆ ಮಾತ್ರವೇ ನೀರು ಎಂದು ನಂಬಲಾಗಿತ್ತು. ಆದರೆ ಒಂದು ಸಣ್ಣ  ಮಳೆ ಬಂದು ಕೊಂಚ ನೆಮ್ಮದಿಯಾಯ್ತು. ನೀರಿಲ್ಲದೆ ಇರುವುದು  ಕುಡಿಯಲಷ್ಟೇ ಅಲ್ಲ ಹಾಸ್ಟೆಲ್ ಗಳಲ್ಲಿ  ಯಥೇಚ್ಛ ನೀರು ಬೇಕು, ಪಿಜಿಗಳಲ್ಲಿ  ನೀರಿಲ್ಲದೆ ಯಾವುದೂ ನಡೆಸಲು ಕಷ್ಟ. ಹೀಗಾಗಿ ವಿದ್ಯಾರ್ಥಿಗಳಿಗೆ ವಸತಿಯೇ ಇಲ್ಲದ ಸ್ಥಿತಿ ಇದೆ.

ನಿರೀಕ್ಷೆಯಂತೆ ಜೂನ್ ಮೊದಲೇ ಮಳೆ ಆರಂಭವಾಗಬೇಕಿತ್ತು. ಆದರೆ ಇನ್ನೂ ಮಳೆ ಆರಂಭವಾಗಿಲ್ಲ. ಹೀಗಾಗಿ ಬರುವ ವಾರವೂ ಕಾಲೇಜುಗಳಿಗೆ ರಜೆ ನೀಡುವುದೋ ಬೇಡವೋ ಎಂಬ ಗೊಂದಲ ಇನ್ನೂ ನಿವಾರಣೆಯಾಗಿಲ್ಲ. ಏಕೆಂದರೆ ರಜೆ ವಿಸ್ತರಣೆ ಹೆಚ್ಚಾದರೆ ಪಿಯು ಬೋರ್ಡ್ ನಿಗದಿತ ಸಮಯದಲ್ಲೇ ಪರೀಕ್ಷೆ   ಮಾಡುತ್ತದೆ ದಾಖಲೆಗಳನ್ನು ನಿಗದಿತ ಸಮಯದಲ್ಲೇ ಕೇಳುತ್ತದೆ. ಹಾಗಾಗಿ ಕಾಲೇಜುನಲ್ಲಿ ವಿದ್ಯಾರ್ಥಿಗಳಿಗೆ ಪಾಠಗಳನ್ನು ಮುಗಿಸುವ ಹಾಗೂ ಫಲಿತಾಂಶದ ಕಡೆಗೆ ದೃಷ್ಠಿ ನೆಡುವ ಕೆಲಸ ಸಂಸ್ಥೆಗಳಿಂದ ನಡೆಯಬೇಕು. ನೀರಿಲ್ಲ ಎನ್ನುವುದು  ಎಷ್ಟೆಲ್ಲಾ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದರೆ ವಿದ್ಯಾರ್ಥಿಗಳ ಭವಿಷ್ಯದ ಮೇಲೂ ಪರಿಣಾಮ ಬೀರುತ್ತಿದೆ.

ಪುತ್ತೂರು ಕೂಡ  ಶೈಕ್ಷಣಿಕ ಕೇಂದ್ರ. ಇಲ್ಲಿನ ಕಾಲೇಜುಗಳು ರಜೆಯನ್ನು  ಮುಂದೆ ಹಾಕಿಲ್ಲ. ಇದ್ದ ನೀರನ್ನೇ ಬಳಸಿಕೊಂಡು ವ್ಯವಸ್ಥೆ ಮಾಡಿದರೆ. ಕೆಲವು ಪಿ ಜಿ ಗಳಲ್ಲಿ  ನೀರಿನ ಸಮಸ್ಯೆ ಇದೆ. ಅಲ್ಲೂ ಸರ್ಕಸ್ ಮಾಡುತ್ತಿದ್ದಾರೆ. ಮಕ್ಕಳು ಕೇಳಬೇಕಲ್ಲಾ ಕಡಿಮೆ ನೀರು ಬಳಸಲು ಎಂದು ಪಿ ಜಿ ನಡೆಸುವ ಮೋಹನ್ ರಾವ್ ಹೇಳುತ್ತಾರೆ.

ಸುಳ್ಯದಲ್ಲಿ ನೀರಿನ ಸಮಸ್ಯೆ ಅಷ್ಟೊಂದು ಕಾಡಿಲ್ಲ. ಹಾಸ್ಟೆಲ್, ಪಿಜಿಗಳಲ್ಲಿ  ನೀರಿನ ಸಮಸ್ಯೆಯನ್ನು  ನಿಭಾಯಿಸುತ್ತಿದೆ.  ಬೆಳ್ತಂಗಡಿಯಲ್ಲೂ ನೀರಿನ ಕೊರತೆಯ ಕಾರಣದಿಂದ ಕಾಲೇಜು ಆರಂಭಕ್ಕೆ ಯಾವುದೇ ತೊಂದರೆ ಆಗಿಲ್ಲ.

ಮಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಗೃಹಿಣಿ ಸಂಧ್ಯಾ ಹೇಳುತ್ತಾರೆ, ಈಗ ರೇಶನ್ ಮೂಲಕ ನೀರು. ಹೀಗೇ ಆದರೆ ಮುಂದೆ ಅದಕ್ಕೂ ಪರದಾಟ ಮಾಡಬೇಕಾಗಬಹುದು  ಎನ್ನುತ್ತಾರೆ.

ಮಂಗಳೂರಿನಲ್ಲಿ ನೀರಿಲ್ಲ ಎನ್ನುವುದೇ ಬಹುದೊಡ್ಡ ಸಮಸ್ಯೆ ಹಾಗೂ ಅಚ್ಚರಿಯಾಗಿದೆ. ಶೈಕ್ಷಣಿಕ ಕಾರಣಕ್ಕಾಗಿ ನಾವು ಮಕ್ಕಳನ್ನು  ಮಂಗಳೂರಿನಲ್ಲಿ ಕಾಲೇಜಿಗೆ ಸೇರಿಸುತ್ತೇವೆ. ಈಗ ನೀರಿಲ್ಲ ಎನ್ನುವ ಕಾರಣಕ್ಕೆ ಕಾಲೇಜಿಗೆ ರಜೆ ನೀಡಲಾಗುತ್ತದೆ ಎನ್ನುವುದು ದಿಗ್ಭ್ರಮೆಯಾಗುತ್ತದೆ ಏಕೆಂದರೆ ಅದು ಮಲೆನಾಡಿನ ತಪ್ಪಲು, ಕರಾವಳಿ. ಯಾಕೆ ಹೀಗೆ ಎನ್ನುವುದರ ಬಗ್ಗೆ ಗಮನಹರಿಸಲೇಬೇಕಿದೆ ಎನ್ನುತ್ತಾರೆ ಪೋಷಕ ಗಿರೀಶ್.

ಉಡುಪಿಯಲ್ಲೂ ನೀರಿನ ಸಮಸ್ಯೆ ಕಾಡುತ್ತಿದ್ದು ಸರಕಾರಿ ಶಾಲೆಗಳಿಗೆ ಮಧ್ಯಾಹ್ನ ನಂತರ ರಜೆ ಸಾರಲು ಚಿಂತನೆ ನಡೆಸಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

3 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

11 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

18 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

19 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

20 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago