Advertisement
ಸುದ್ದಿಗಳು

ಮಂಗಳೂರಿನಲ್ಲಿ ಮತ್ತೆ 4 ಮಂದಿಗೆ ಕೊರೊನಾ ವೈರಸ್ ಸೋಂಕು | ರಾಜ್ಯದಲ್ಲಿ40 ಪ್ರಕರಣ | ದೇಶದಲ್ಲಿ 519 ಪ್ರಕರಣ ಪತ್ತೆ

Share

ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ  ಮತ್ತೆ 4 ಮಂದಿಯಲ್ಲಿ  ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 4 ಪ್ರಕರಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣದಲ್ಲಿ ನಾಲ್ವರು ಕೇರಳ ಮೂಲದವರು ಎಂದು ತಿಳಿದುಬಂದಿದೆ. ಮೂವರು ದುಬೈನಿಂದ ಬಂದಿದ್ದು, ಒಬ್ಬರು ಸೌದಿಯಿಂದ ಬಂದವರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 40 ಪ್ರಕರಣ ಪತ್ತೆಯಾದರೆ ದೇಶದಲ್ಲಿ ಒಟ್ಟು 519 ಕೊರೊನಾ ವೈರಸ್ ಸೋಂಕಾದ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ  ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.

32 ವರ್ಷದ ವ್ಯಕ್ತಿ ಕಾಸರಗೋಡು ಮೂಲದವರಾಗಿದ್ದು, ಸ್ಪೈಸ್ ಜೆಟ್ ಮೂಲಕ ದುಬೈನಿಂದ ಮಾರ್ಚ್ 20ರಂದು ಮಂಗಳೂರಿಗೆ ಬಂದಿದ್ದರು. 42 ವರ್ಷದ ವ್ಯಕ್ತಿ ಮಾರ್ಚ್ 19ಕ್ಕೆ ಮಂಗಳೂರಿಗೆ ಬಂದಿದ್ದರು. ಮೂವರನ್ನು ನಗರದ ವೆನ್ ‌ಲಾಕ್‌ ಆಸ್ಪತ್ರೆಯಲ್ಲಿ ಹಾಗೂ ಒಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಮತ್ತು ಸ್ಪೈಸ್ ಜೆಟ್ ನಲ್ಲಿ ಬಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರು. ಇದೀಗ ಈ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಮಾರ್ಚ್ 22ರಂದು ಕೊರೊನಾ ಪಾಸಿಟಿವ್ ಬಂದಿದ್ದ ವ್ಯಕ್ತಿ ಪಯಣಿಸಿದ್ದ ವಿಮಾನದಲ್ಲೇ ಈ ನಾಲ್ವರು ಪಯಣಿಸಿದ್ದರು ಎಂಬುದು ತಿಳಿದುಬಂದಿದೆ.

ದೇಶದಲ್ಲಿ  ಮಹಾರಾಷ್ಟ್ರದಲ್ಲಿ  ಇದುವರೆಗೆ  101 ಪ್ರಕರಣ ಹಾಗೂ ಕೇರಳದಲ್ಲಿ95  ಪ್ರಕರಣ ಪತ್ತೆಯಾಗಿದ್ದು,  ಕರ್ನಾಟಕ 3 ನೇ ಸ್ಥಾನದಲ್ಲಿದೆ. ಒಟ್ಟಾರೆ  35 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಬೆಂಗಳೂರಿನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈವರೆಗೂ 14, 910 ಮಂದಿಯನ್ನು ಇರಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

11 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

11 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

12 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

12 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

12 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago