ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ ಮತ್ತೆ 4 ಮಂದಿಯಲ್ಲಿ ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 4 ಪ್ರಕರಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣದಲ್ಲಿ ನಾಲ್ವರು ಕೇರಳ ಮೂಲದವರು ಎಂದು ತಿಳಿದುಬಂದಿದೆ. ಮೂವರು ದುಬೈನಿಂದ ಬಂದಿದ್ದು, ಒಬ್ಬರು ಸೌದಿಯಿಂದ ಬಂದವರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 40 ಪ್ರಕರಣ ಪತ್ತೆಯಾದರೆ ದೇಶದಲ್ಲಿ ಒಟ್ಟು 519 ಕೊರೊನಾ ವೈರಸ್ ಸೋಂಕಾದ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.
32 ವರ್ಷದ ವ್ಯಕ್ತಿ ಕಾಸರಗೋಡು ಮೂಲದವರಾಗಿದ್ದು, ಸ್ಪೈಸ್ ಜೆಟ್ ಮೂಲಕ ದುಬೈನಿಂದ ಮಾರ್ಚ್ 20ರಂದು ಮಂಗಳೂರಿಗೆ ಬಂದಿದ್ದರು. 42 ವರ್ಷದ ವ್ಯಕ್ತಿ ಮಾರ್ಚ್ 19ಕ್ಕೆ ಮಂಗಳೂರಿಗೆ ಬಂದಿದ್ದರು. ಮೂವರನ್ನು ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಹಾಗೂ ಒಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಸೋಂಕಿನ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಮತ್ತು ಸ್ಪೈಸ್ ಜೆಟ್ ನಲ್ಲಿ ಬಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರು. ಇದೀಗ ಈ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಮಾರ್ಚ್ 22ರಂದು ಕೊರೊನಾ ಪಾಸಿಟಿವ್ ಬಂದಿದ್ದ ವ್ಯಕ್ತಿ ಪಯಣಿಸಿದ್ದ ವಿಮಾನದಲ್ಲೇ ಈ ನಾಲ್ವರು ಪಯಣಿಸಿದ್ದರು ಎಂಬುದು ತಿಳಿದುಬಂದಿದೆ.
ದೇಶದಲ್ಲಿ ಮಹಾರಾಷ್ಟ್ರದಲ್ಲಿ ಇದುವರೆಗೆ 101 ಪ್ರಕರಣ ಹಾಗೂ ಕೇರಳದಲ್ಲಿ95 ಪ್ರಕರಣ ಪತ್ತೆಯಾಗಿದ್ದು, ಕರ್ನಾಟಕ 3 ನೇ ಸ್ಥಾನದಲ್ಲಿದೆ. ಒಟ್ಟಾರೆ 35 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.
ಬೆಂಗಳೂರಿನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈವರೆಗೂ 14, 910 ಮಂದಿಯನ್ನು ಇರಿಸಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…