Advertisement
ಸುದ್ದಿಗಳು

ಮಂಗಳೂರಿನಲ್ಲಿ ಮತ್ತೆ 4 ಮಂದಿಗೆ ಕೊರೊನಾ ವೈರಸ್ ಸೋಂಕು | ರಾಜ್ಯದಲ್ಲಿ40 ಪ್ರಕರಣ | ದೇಶದಲ್ಲಿ 519 ಪ್ರಕರಣ ಪತ್ತೆ

Share

ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ  ಮತ್ತೆ 4 ಮಂದಿಯಲ್ಲಿ  ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 4 ಪ್ರಕರಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣದಲ್ಲಿ ನಾಲ್ವರು ಕೇರಳ ಮೂಲದವರು ಎಂದು ತಿಳಿದುಬಂದಿದೆ. ಮೂವರು ದುಬೈನಿಂದ ಬಂದಿದ್ದು, ಒಬ್ಬರು ಸೌದಿಯಿಂದ ಬಂದವರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 40 ಪ್ರಕರಣ ಪತ್ತೆಯಾದರೆ ದೇಶದಲ್ಲಿ ಒಟ್ಟು 519 ಕೊರೊನಾ ವೈರಸ್ ಸೋಂಕಾದ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ  ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.

32 ವರ್ಷದ ವ್ಯಕ್ತಿ ಕಾಸರಗೋಡು ಮೂಲದವರಾಗಿದ್ದು, ಸ್ಪೈಸ್ ಜೆಟ್ ಮೂಲಕ ದುಬೈನಿಂದ ಮಾರ್ಚ್ 20ರಂದು ಮಂಗಳೂರಿಗೆ ಬಂದಿದ್ದರು. 42 ವರ್ಷದ ವ್ಯಕ್ತಿ ಮಾರ್ಚ್ 19ಕ್ಕೆ ಮಂಗಳೂರಿಗೆ ಬಂದಿದ್ದರು. ಮೂವರನ್ನು ನಗರದ ವೆನ್ ‌ಲಾಕ್‌ ಆಸ್ಪತ್ರೆಯಲ್ಲಿ ಹಾಗೂ ಒಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಮತ್ತು ಸ್ಪೈಸ್ ಜೆಟ್ ನಲ್ಲಿ ಬಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರು. ಇದೀಗ ಈ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಮಾರ್ಚ್ 22ರಂದು ಕೊರೊನಾ ಪಾಸಿಟಿವ್ ಬಂದಿದ್ದ ವ್ಯಕ್ತಿ ಪಯಣಿಸಿದ್ದ ವಿಮಾನದಲ್ಲೇ ಈ ನಾಲ್ವರು ಪಯಣಿಸಿದ್ದರು ಎಂಬುದು ತಿಳಿದುಬಂದಿದೆ.

ದೇಶದಲ್ಲಿ  ಮಹಾರಾಷ್ಟ್ರದಲ್ಲಿ  ಇದುವರೆಗೆ  101 ಪ್ರಕರಣ ಹಾಗೂ ಕೇರಳದಲ್ಲಿ95  ಪ್ರಕರಣ ಪತ್ತೆಯಾಗಿದ್ದು,  ಕರ್ನಾಟಕ 3 ನೇ ಸ್ಥಾನದಲ್ಲಿದೆ. ಒಟ್ಟಾರೆ  35 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಬೆಂಗಳೂರಿನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈವರೆಗೂ 14, 910 ಮಂದಿಯನ್ನು ಇರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago