Advertisement
ಸುದ್ದಿಗಳು

ಮಂಗಳೂರಿನಲ್ಲಿ ಮತ್ತೆ 4 ಮಂದಿಗೆ ಕೊರೊನಾ ವೈರಸ್ ಸೋಂಕು | ರಾಜ್ಯದಲ್ಲಿ40 ಪ್ರಕರಣ | ದೇಶದಲ್ಲಿ 519 ಪ್ರಕರಣ ಪತ್ತೆ

Share

ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ  ಮತ್ತೆ 4 ಮಂದಿಯಲ್ಲಿ  ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 4 ಪ್ರಕರಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣದಲ್ಲಿ ನಾಲ್ವರು ಕೇರಳ ಮೂಲದವರು ಎಂದು ತಿಳಿದುಬಂದಿದೆ. ಮೂವರು ದುಬೈನಿಂದ ಬಂದಿದ್ದು, ಒಬ್ಬರು ಸೌದಿಯಿಂದ ಬಂದವರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 40 ಪ್ರಕರಣ ಪತ್ತೆಯಾದರೆ ದೇಶದಲ್ಲಿ ಒಟ್ಟು 519 ಕೊರೊನಾ ವೈರಸ್ ಸೋಂಕಾದ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ  ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.

32 ವರ್ಷದ ವ್ಯಕ್ತಿ ಕಾಸರಗೋಡು ಮೂಲದವರಾಗಿದ್ದು, ಸ್ಪೈಸ್ ಜೆಟ್ ಮೂಲಕ ದುಬೈನಿಂದ ಮಾರ್ಚ್ 20ರಂದು ಮಂಗಳೂರಿಗೆ ಬಂದಿದ್ದರು. 42 ವರ್ಷದ ವ್ಯಕ್ತಿ ಮಾರ್ಚ್ 19ಕ್ಕೆ ಮಂಗಳೂರಿಗೆ ಬಂದಿದ್ದರು. ಮೂವರನ್ನು ನಗರದ ವೆನ್ ‌ಲಾಕ್‌ ಆಸ್ಪತ್ರೆಯಲ್ಲಿ ಹಾಗೂ ಒಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಮತ್ತು ಸ್ಪೈಸ್ ಜೆಟ್ ನಲ್ಲಿ ಬಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರು. ಇದೀಗ ಈ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಮಾರ್ಚ್ 22ರಂದು ಕೊರೊನಾ ಪಾಸಿಟಿವ್ ಬಂದಿದ್ದ ವ್ಯಕ್ತಿ ಪಯಣಿಸಿದ್ದ ವಿಮಾನದಲ್ಲೇ ಈ ನಾಲ್ವರು ಪಯಣಿಸಿದ್ದರು ಎಂಬುದು ತಿಳಿದುಬಂದಿದೆ.

ದೇಶದಲ್ಲಿ  ಮಹಾರಾಷ್ಟ್ರದಲ್ಲಿ  ಇದುವರೆಗೆ  101 ಪ್ರಕರಣ ಹಾಗೂ ಕೇರಳದಲ್ಲಿ95  ಪ್ರಕರಣ ಪತ್ತೆಯಾಗಿದ್ದು,  ಕರ್ನಾಟಕ 3 ನೇ ಸ್ಥಾನದಲ್ಲಿದೆ. ಒಟ್ಟಾರೆ  35 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಬೆಂಗಳೂರಿನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈವರೆಗೂ 14, 910 ಮಂದಿಯನ್ನು ಇರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

9 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

10 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

11 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

11 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

11 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

12 hours ago