Advertisement
ಸುದ್ದಿಗಳು

ಮಂಗಳೂರಿನಲ್ಲಿ ಮತ್ತೆ 4 ಮಂದಿಗೆ ಕೊರೊನಾ ವೈರಸ್ ಸೋಂಕು | ರಾಜ್ಯದಲ್ಲಿ40 ಪ್ರಕರಣ | ದೇಶದಲ್ಲಿ 519 ಪ್ರಕರಣ ಪತ್ತೆ

Share

ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ  ಮತ್ತೆ 4 ಮಂದಿಯಲ್ಲಿ  ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 4 ಪ್ರಕರಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣದಲ್ಲಿ ನಾಲ್ವರು ಕೇರಳ ಮೂಲದವರು ಎಂದು ತಿಳಿದುಬಂದಿದೆ. ಮೂವರು ದುಬೈನಿಂದ ಬಂದಿದ್ದು, ಒಬ್ಬರು ಸೌದಿಯಿಂದ ಬಂದವರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 40 ಪ್ರಕರಣ ಪತ್ತೆಯಾದರೆ ದೇಶದಲ್ಲಿ ಒಟ್ಟು 519 ಕೊರೊನಾ ವೈರಸ್ ಸೋಂಕಾದ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ  ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.

32 ವರ್ಷದ ವ್ಯಕ್ತಿ ಕಾಸರಗೋಡು ಮೂಲದವರಾಗಿದ್ದು, ಸ್ಪೈಸ್ ಜೆಟ್ ಮೂಲಕ ದುಬೈನಿಂದ ಮಾರ್ಚ್ 20ರಂದು ಮಂಗಳೂರಿಗೆ ಬಂದಿದ್ದರು. 42 ವರ್ಷದ ವ್ಯಕ್ತಿ ಮಾರ್ಚ್ 19ಕ್ಕೆ ಮಂಗಳೂರಿಗೆ ಬಂದಿದ್ದರು. ಮೂವರನ್ನು ನಗರದ ವೆನ್ ‌ಲಾಕ್‌ ಆಸ್ಪತ್ರೆಯಲ್ಲಿ ಹಾಗೂ ಒಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ಸೋಂಕಿನ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಮತ್ತು ಸ್ಪೈಸ್ ಜೆಟ್ ನಲ್ಲಿ ಬಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರು. ಇದೀಗ ಈ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಮಾರ್ಚ್ 22ರಂದು ಕೊರೊನಾ ಪಾಸಿಟಿವ್ ಬಂದಿದ್ದ ವ್ಯಕ್ತಿ ಪಯಣಿಸಿದ್ದ ವಿಮಾನದಲ್ಲೇ ಈ ನಾಲ್ವರು ಪಯಣಿಸಿದ್ದರು ಎಂಬುದು ತಿಳಿದುಬಂದಿದೆ.

ದೇಶದಲ್ಲಿ  ಮಹಾರಾಷ್ಟ್ರದಲ್ಲಿ  ಇದುವರೆಗೆ  101 ಪ್ರಕರಣ ಹಾಗೂ ಕೇರಳದಲ್ಲಿ95  ಪ್ರಕರಣ ಪತ್ತೆಯಾಗಿದ್ದು,  ಕರ್ನಾಟಕ 3 ನೇ ಸ್ಥಾನದಲ್ಲಿದೆ. ಒಟ್ಟಾರೆ  35 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಬೆಂಗಳೂರಿನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈವರೆಗೂ 14, 910 ಮಂದಿಯನ್ನು ಇರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

52 seconds ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

16 minutes ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

16 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago