ಮಂಗಳೂರಿನಲ್ಲಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ

November 28, 2019
10:01 PM

ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.

ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.

ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror