Advertisement
ಸುದ್ದಿಗಳು

ಮಂಗಳೂರಿನಲ್ಲಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ

Share

ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.

ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.

ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

9 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

12 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

15 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago