Advertisement
ಸುದ್ದಿಗಳು

ಮಂಗಳೂರಿನಲ್ಲಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ

Share

ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.

ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.

ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

6 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

16 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago