ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.
ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.
ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…