ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.
ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.
ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…