Advertisement
ಸುದ್ದಿಗಳು

ಮಂಗಳೂರಿನಲ್ಲಿ ಹೈಎಲರ್ಟ್ : ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ : ಬಾಂಬ್ ನಿಷ್ಕ್ರಿಯ ಮಾಡುತ್ತಿರುವ ಸಿಬಂದಿಗಳು

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ  ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ  ಹೈ ಎಲರ್ಟ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ್ದು ಯೋಧ ಗಂಗಯ್ಯ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ  ತೊಡಗಿದೆ. ಈಗ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ನಗರದ ವಿವಿದೆಡೆ ಭದ್ರತೆ ಕೈಗೊಳ್ಳಲಾಗಿದೆ.

ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದಲ್ಲಿ  ಅನುಮಾನಾಸ್ಪದವಾಗಿ ಬ್ಯಾಗ್ ಹಾಗೂ ಲಾಪ್ ಟಾಪ್ ಪತ್ತೆಯಾದ ಬಳಿಕ ಆತಂಕಕ್ಕೆ ಕಾರಣವಾಗಿತ್ತು.ಈ ಅನುಮಾನದ ಹಿನ್ನೆಲೆಯಲ್ಲಿ  ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ. ಲಾಪ್ ಟಾಪ್ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಪತ್ತೆಯಾಗಿತ್ತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಎಲ್ಲಾ ವಿಮಾನಗಳ ಹಾರಾಟದ ಮೇಲೆ ನಿಗಾ ಇಡಲಾಯಿತು. ಆದರೆ ಸದ್ಯ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಇದೀಗ ವಿಮಾನ ನಿಲ್ದಾಣಕ್ಕೆ 3 ಕಡೆಗಳಲ್ಲಿ  ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ಆತಂಕ ಹೆಚ್ಚಾಗಿದೆ. ಆದರೆ ಪೊಲೀಸ್ ಇಲಾಖೆ ಹಾಗೂ ಭದ್ರತಾ ಸಿಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಬಾಂಬ್ ನಿಷ್ಕ್ರಿಯ ಮಾಡುವ ಕೆಲಸ ನಡೆದಿದೆ. ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ ಮಾಡಲಾಗಿತ್ತು.

ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

11 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

15 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago