ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ ಹೈ ಎಲರ್ಟ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ್ದು ಯೋಧ ಗಂಗಯ್ಯ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ. ಈಗ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ನಗರದ ವಿವಿದೆಡೆ ಭದ್ರತೆ ಕೈಗೊಳ್ಳಲಾಗಿದೆ.
ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಾಗೂ ಲಾಪ್ ಟಾಪ್ ಪತ್ತೆಯಾದ ಬಳಿಕ ಆತಂಕಕ್ಕೆ ಕಾರಣವಾಗಿತ್ತು.ಈ ಅನುಮಾನದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ. ಲಾಪ್ ಟಾಪ್ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಪತ್ತೆಯಾಗಿತ್ತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಎಲ್ಲಾ ವಿಮಾನಗಳ ಹಾರಾಟದ ಮೇಲೆ ನಿಗಾ ಇಡಲಾಯಿತು. ಆದರೆ ಸದ್ಯ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಇದೀಗ ವಿಮಾನ ನಿಲ್ದಾಣಕ್ಕೆ 3 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ಆತಂಕ ಹೆಚ್ಚಾಗಿದೆ. ಆದರೆ ಪೊಲೀಸ್ ಇಲಾಖೆ ಹಾಗೂ ಭದ್ರತಾ ಸಿಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಬಾಂಬ್ ನಿಷ್ಕ್ರಿಯ ಮಾಡುವ ಕೆಲಸ ನಡೆದಿದೆ. ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ ಮಾಡಲಾಗಿತ್ತು.
ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…