ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ ಹೈ ಎಲರ್ಟ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ್ದು ಯೋಧ ಗಂಗಯ್ಯ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ. ಈಗ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ನಗರದ ವಿವಿದೆಡೆ ಭದ್ರತೆ ಕೈಗೊಳ್ಳಲಾಗಿದೆ.
ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಾಗೂ ಲಾಪ್ ಟಾಪ್ ಪತ್ತೆಯಾದ ಬಳಿಕ ಆತಂಕಕ್ಕೆ ಕಾರಣವಾಗಿತ್ತು.ಈ ಅನುಮಾನದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ. ಲಾಪ್ ಟಾಪ್ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಪತ್ತೆಯಾಗಿತ್ತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಎಲ್ಲಾ ವಿಮಾನಗಳ ಹಾರಾಟದ ಮೇಲೆ ನಿಗಾ ಇಡಲಾಯಿತು. ಆದರೆ ಸದ್ಯ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಇದೀಗ ವಿಮಾನ ನಿಲ್ದಾಣಕ್ಕೆ 3 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ಆತಂಕ ಹೆಚ್ಚಾಗಿದೆ. ಆದರೆ ಪೊಲೀಸ್ ಇಲಾಖೆ ಹಾಗೂ ಭದ್ರತಾ ಸಿಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಬಾಂಬ್ ನಿಷ್ಕ್ರಿಯ ಮಾಡುವ ಕೆಲಸ ನಡೆದಿದೆ. ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ ಮಾಡಲಾಗಿತ್ತು.
ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…