ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ ಹೈ ಎಲರ್ಟ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ್ದು ಯೋಧ ಗಂಗಯ್ಯ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ. ಈಗ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ನಗರದ ವಿವಿದೆಡೆ ಭದ್ರತೆ ಕೈಗೊಳ್ಳಲಾಗಿದೆ.
ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಾಗೂ ಲಾಪ್ ಟಾಪ್ ಪತ್ತೆಯಾದ ಬಳಿಕ ಆತಂಕಕ್ಕೆ ಕಾರಣವಾಗಿತ್ತು.ಈ ಅನುಮಾನದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ. ಲಾಪ್ ಟಾಪ್ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಪತ್ತೆಯಾಗಿತ್ತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಎಲ್ಲಾ ವಿಮಾನಗಳ ಹಾರಾಟದ ಮೇಲೆ ನಿಗಾ ಇಡಲಾಯಿತು. ಆದರೆ ಸದ್ಯ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಇದೀಗ ವಿಮಾನ ನಿಲ್ದಾಣಕ್ಕೆ 3 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ಆತಂಕ ಹೆಚ್ಚಾಗಿದೆ. ಆದರೆ ಪೊಲೀಸ್ ಇಲಾಖೆ ಹಾಗೂ ಭದ್ರತಾ ಸಿಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಬಾಂಬ್ ನಿಷ್ಕ್ರಿಯ ಮಾಡುವ ಕೆಲಸ ನಡೆದಿದೆ. ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ ಮಾಡಲಾಗಿತ್ತು.
ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…