Advertisement
MIRROR FOCUS

ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆಯಂತೆ….!

Share

ಕಳೆದ ಹಲವಾರು ಸಮಯಗಳಿಂದ ಚರ್ಚೆಯಲ್ಲಿದ್ದ ಮಂಗಳೂರು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಮುಗಿಯಲಿದೆ ಎಂಬ ಸುದ್ದಿ ಬಂದಿದೆ. ಆದಷ್ಟು ಶೀಘ್ರದಲ್ಲೇ ಈ ಸೇತುವೆ ಕೆಲಸ ಮುಗಿಯಲಿ ಎಂಬ ಆಶಯದೊಂದಿಗೆ…

Advertisement
Advertisement

ಕಳೆದ ಕೆಲ ವರ್ಷಗಳಿಂದ  ಗಡುವುಗಳ ಮೇಲೆ ಗಡುವು ಮುಗಿದಿ  ಇದೀಗ ಮತ್ತೆ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಸುವ ಬಗ್ಗೆ ಸೂಚನೆಯನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಈ ಬಾರಿ ಪಕ್ಕಾ ಪಂಪ್ ವೆಲ್ ಮೇಲ್ಸೇತುವೆ ಫಿನಿಶ್ ಆಗಲಿದೆ. ಟೀಕೆ, ಟಿಪ್ಪಣಿ ಜತೆಗೆ ಅಪಹಾಸ್ಯಕ್ಕೆ ಗುರಿಯಾಗಿದ್ದ “ಈ ಸೇತುವೆ ಕಾಮಗಾರಿ ಈ ಬಾರಿ ನಿಶ್ಚಿತವಾಗಿಯೂ ಮುಗಿಯುತ್ತದೆ.!”  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಮತ್ತೊಂದು ಅಂತಿಮ ಗಡುವಿನ ಭರವಸೆ 2020ರ ಜನವರಿಯಿಂದಲಾದರೂ ಸಾರ್ವಜನಿಕರಿಗೆ ಮುಕ್ತಗೊಳ್ಳುವ ನಿರೀಕ್ಷೆ ಮೂಡಿಸಿದೆ.

ಪಂಪ್‌ವೆಲ್ ಮೇಲ್ಸೇತುವೆಯು ಒಟ್ಟು 600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿದ್ದು, ಕಾಮಗಾರಿಗೆ 2010ರಲ್ಲಿಯೇ ಚಾಲನೆ ನೀಡಲಾಗಿತ್ತು. ಮೊದಲ ಆರು ವರ್ಷದಲ್ಲಿ ತೀವ್ರ ನಿಧಾನಗತಿಯಲ್ಲಿ ಸಾಗಿದ ಕಾಮಗಾರಿಯು ಕಳೆದ ಮೂರು ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ವೇಗ ಪಡೆದಿತ್ತು. ಕಳೆದ ಬಾರಿಯ ಮಳೆಗಾಲದಲ್ಲಿ ಕಾಮಗಾರಿ ಮತ್ತೆ ಕುಂಟುತ್ತಾ ಸಾಗಿತ್ತು. ಹಾಗಿದ್ದರೂ 2019ರ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ರವರು ನವಯುಗ್ ಸಂಸ್ಥೆಗೆ ಒತ್ತಡ ಹೇರಿದ್ದರು. ಫೆಬ್ರವರಿಯಲ್ಲಿ ಪಂಪ್‌ವೆಲ್ ಮತ್ತು ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ. ನವಯುಗ್ ಸಂಸ್ಥೆಯವರು ಈ ಹಿಂದೆಯೇ ಅನೇಕ ಬಾರಿ ಗಡುವು ನೀಡಿದ್ದರೂ, ಆ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್‌ರವರು, ಕಳೆದ ಫೆಬ್ರವರಿ ಅಂತ್ಯಕ್ಕೆ ಈ ಗಡುವಿಗೆ ಪೂರ್ಣಗೊಳ್ಳದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದರು!

ಆದರೆ ಆ ಗಡುವು ಕೂಡಾ ಸಾಧ್ಯವಾಗಾದಾಗ ಕಳೆದ ಫೆಬ್ರವರಿ 28ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಕಾರ್ಯದರ್ಶಿ ವೈಭವ್ ದಾಂಗೆಯವರು ಮಂಗಳೂರಿಗೆ ಭೇಟಿ ನೀಡಿ ಸಂಸದರ ಜತೆ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದ್ದರು. 2019ರ ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಕೂಡಾ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಕಾಮಗಾರಿ ಮಾತ್ರ ಪೂರ್ಣಗೊಂಡಿರಲಿಲ್ಲ. ಆ ಬಳಿಕ ಜೂನ್‌ನಿಂದ ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತಗೊಂಡಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

6 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

6 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago