MIRROR FOCUS

ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆಯಂತೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಹಲವಾರು ಸಮಯಗಳಿಂದ ಚರ್ಚೆಯಲ್ಲಿದ್ದ ಮಂಗಳೂರು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಮುಗಿಯಲಿದೆ ಎಂಬ ಸುದ್ದಿ ಬಂದಿದೆ. ಆದಷ್ಟು ಶೀಘ್ರದಲ್ಲೇ ಈ ಸೇತುವೆ ಕೆಲಸ ಮುಗಿಯಲಿ ಎಂಬ ಆಶಯದೊಂದಿಗೆ…

Advertisement
Advertisement

ಕಳೆದ ಕೆಲ ವರ್ಷಗಳಿಂದ  ಗಡುವುಗಳ ಮೇಲೆ ಗಡುವು ಮುಗಿದಿ  ಇದೀಗ ಮತ್ತೆ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಸುವ ಬಗ್ಗೆ ಸೂಚನೆಯನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಈ ಬಾರಿ ಪಕ್ಕಾ ಪಂಪ್ ವೆಲ್ ಮೇಲ್ಸೇತುವೆ ಫಿನಿಶ್ ಆಗಲಿದೆ. ಟೀಕೆ, ಟಿಪ್ಪಣಿ ಜತೆಗೆ ಅಪಹಾಸ್ಯಕ್ಕೆ ಗುರಿಯಾಗಿದ್ದ “ಈ ಸೇತುವೆ ಕಾಮಗಾರಿ ಈ ಬಾರಿ ನಿಶ್ಚಿತವಾಗಿಯೂ ಮುಗಿಯುತ್ತದೆ.!”  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಮತ್ತೊಂದು ಅಂತಿಮ ಗಡುವಿನ ಭರವಸೆ 2020ರ ಜನವರಿಯಿಂದಲಾದರೂ ಸಾರ್ವಜನಿಕರಿಗೆ ಮುಕ್ತಗೊಳ್ಳುವ ನಿರೀಕ್ಷೆ ಮೂಡಿಸಿದೆ.

ಪಂಪ್‌ವೆಲ್ ಮೇಲ್ಸೇತುವೆಯು ಒಟ್ಟು 600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿದ್ದು, ಕಾಮಗಾರಿಗೆ 2010ರಲ್ಲಿಯೇ ಚಾಲನೆ ನೀಡಲಾಗಿತ್ತು. ಮೊದಲ ಆರು ವರ್ಷದಲ್ಲಿ ತೀವ್ರ ನಿಧಾನಗತಿಯಲ್ಲಿ ಸಾಗಿದ ಕಾಮಗಾರಿಯು ಕಳೆದ ಮೂರು ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ವೇಗ ಪಡೆದಿತ್ತು. ಕಳೆದ ಬಾರಿಯ ಮಳೆಗಾಲದಲ್ಲಿ ಕಾಮಗಾರಿ ಮತ್ತೆ ಕುಂಟುತ್ತಾ ಸಾಗಿತ್ತು. ಹಾಗಿದ್ದರೂ 2019ರ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ರವರು ನವಯುಗ್ ಸಂಸ್ಥೆಗೆ ಒತ್ತಡ ಹೇರಿದ್ದರು. ಫೆಬ್ರವರಿಯಲ್ಲಿ ಪಂಪ್‌ವೆಲ್ ಮತ್ತು ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ. ನವಯುಗ್ ಸಂಸ್ಥೆಯವರು ಈ ಹಿಂದೆಯೇ ಅನೇಕ ಬಾರಿ ಗಡುವು ನೀಡಿದ್ದರೂ, ಆ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್‌ರವರು, ಕಳೆದ ಫೆಬ್ರವರಿ ಅಂತ್ಯಕ್ಕೆ ಈ ಗಡುವಿಗೆ ಪೂರ್ಣಗೊಳ್ಳದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದರು!

ಆದರೆ ಆ ಗಡುವು ಕೂಡಾ ಸಾಧ್ಯವಾಗಾದಾಗ ಕಳೆದ ಫೆಬ್ರವರಿ 28ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಕಾರ್ಯದರ್ಶಿ ವೈಭವ್ ದಾಂಗೆಯವರು ಮಂಗಳೂರಿಗೆ ಭೇಟಿ ನೀಡಿ ಸಂಸದರ ಜತೆ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದ್ದರು. 2019ರ ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಕೂಡಾ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಕಾಮಗಾರಿ ಮಾತ್ರ ಪೂರ್ಣಗೊಂಡಿರಲಿಲ್ಲ. ಆ ಬಳಿಕ ಜೂನ್‌ನಿಂದ ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತಗೊಂಡಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

6 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

6 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

7 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

21 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 days ago