Advertisement
MIRROR FOCUS

ಮಂಗಳೂರಿನ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆಯಂತೆ….!

Share

ಕಳೆದ ಹಲವಾರು ಸಮಯಗಳಿಂದ ಚರ್ಚೆಯಲ್ಲಿದ್ದ ಮಂಗಳೂರು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಈ ವರ್ಷದ ಅಂತ್ಯಕ್ಕೆ ಮುಗಿಯಲಿದೆ ಎಂಬ ಸುದ್ದಿ ಬಂದಿದೆ. ಆದಷ್ಟು ಶೀಘ್ರದಲ್ಲೇ ಈ ಸೇತುವೆ ಕೆಲಸ ಮುಗಿಯಲಿ ಎಂಬ ಆಶಯದೊಂದಿಗೆ…


ಕಳೆದ ಕೆಲ ವರ್ಷಗಳಿಂದ  ಗಡುವುಗಳ ಮೇಲೆ ಗಡುವು ಮುಗಿದಿ  ಇದೀಗ ಮತ್ತೆ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಸುವ ಬಗ್ಗೆ ಸೂಚನೆಯನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಈ ಬಾರಿ ಪಕ್ಕಾ ಪಂಪ್ ವೆಲ್ ಮೇಲ್ಸೇತುವೆ ಫಿನಿಶ್ ಆಗಲಿದೆ. ಟೀಕೆ, ಟಿಪ್ಪಣಿ ಜತೆಗೆ ಅಪಹಾಸ್ಯಕ್ಕೆ ಗುರಿಯಾಗಿದ್ದ “ಈ ಸೇತುವೆ ಕಾಮಗಾರಿ ಈ ಬಾರಿ ನಿಶ್ಚಿತವಾಗಿಯೂ ಮುಗಿಯುತ್ತದೆ.!”  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಮತ್ತೊಂದು ಅಂತಿಮ ಗಡುವಿನ ಭರವಸೆ 2020ರ ಜನವರಿಯಿಂದಲಾದರೂ ಸಾರ್ವಜನಿಕರಿಗೆ ಮುಕ್ತಗೊಳ್ಳುವ ನಿರೀಕ್ಷೆ ಮೂಡಿಸಿದೆ.

ಪಂಪ್‌ವೆಲ್ ಮೇಲ್ಸೇತುವೆಯು ಒಟ್ಟು 600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿದ್ದು, ಕಾಮಗಾರಿಗೆ 2010ರಲ್ಲಿಯೇ ಚಾಲನೆ ನೀಡಲಾಗಿತ್ತು. ಮೊದಲ ಆರು ವರ್ಷದಲ್ಲಿ ತೀವ್ರ ನಿಧಾನಗತಿಯಲ್ಲಿ ಸಾಗಿದ ಕಾಮಗಾರಿಯು ಕಳೆದ ಮೂರು ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ವೇಗ ಪಡೆದಿತ್ತು. ಕಳೆದ ಬಾರಿಯ ಮಳೆಗಾಲದಲ್ಲಿ ಕಾಮಗಾರಿ ಮತ್ತೆ ಕುಂಟುತ್ತಾ ಸಾಗಿತ್ತು. ಹಾಗಿದ್ದರೂ 2019ರ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ರವರು ನವಯುಗ್ ಸಂಸ್ಥೆಗೆ ಒತ್ತಡ ಹೇರಿದ್ದರು. ಫೆಬ್ರವರಿಯಲ್ಲಿ ಪಂಪ್‌ವೆಲ್ ಮತ್ತು ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ. ನವಯುಗ್ ಸಂಸ್ಥೆಯವರು ಈ ಹಿಂದೆಯೇ ಅನೇಕ ಬಾರಿ ಗಡುವು ನೀಡಿದ್ದರೂ, ಆ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್‌ರವರು, ಕಳೆದ ಫೆಬ್ರವರಿ ಅಂತ್ಯಕ್ಕೆ ಈ ಗಡುವಿಗೆ ಪೂರ್ಣಗೊಳ್ಳದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದರು!

ಆದರೆ ಆ ಗಡುವು ಕೂಡಾ ಸಾಧ್ಯವಾಗಾದಾಗ ಕಳೆದ ಫೆಬ್ರವರಿ 28ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಕಾರ್ಯದರ್ಶಿ ವೈಭವ್ ದಾಂಗೆಯವರು ಮಂಗಳೂರಿಗೆ ಭೇಟಿ ನೀಡಿ ಸಂಸದರ ಜತೆ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದ್ದರು. 2019ರ ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಕೂಡಾ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಕಾಮಗಾರಿ ಮಾತ್ರ ಪೂರ್ಣಗೊಂಡಿರಲಿಲ್ಲ. ಆ ಬಳಿಕ ಜೂನ್‌ನಿಂದ ಮಳೆ ಆರಂಭವಾಗಿ ಕಾಮಗಾರಿ ಸ್ಥಗಿತಗೊಂಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

4 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

4 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

8 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago