ಮಂಗಳೂರು ಘಟನೆಗೆ ರಾಜ್ಯ ಸರಕಾರವೇ ಹೋಣೆ : ರಮಾನಾಥ ರೈ

December 20, 2019
3:34 PM

ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ  ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಗೋಲೀಬಾರ್‌ ನಡೆಸುವಂತಹ ಸ್ಥಿತಿ  ನಿರ್ಮಾಣವಾಗಿರಲಿಲ್ಲ. ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror