ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲೀಬಾರ್ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ. ಎನ್ಆರ್ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್ಕುಮಾರ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…