ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲೀಬಾರ್ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ. ಎನ್ಆರ್ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್ಕುಮಾರ್ ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…