ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲೀಬಾರ್ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ. ಎನ್ಆರ್ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್ಕುಮಾರ್ ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…